ಮುಂದಿನ 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ!
ಮಲೆನಾಡಿನ ಭಾಗದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ ಹಾಗೂ ಕಳಸ ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ಮುಂದಿನ ಪರಿಸ್ಥಿತಿಯನ್ನು ಅವಲೋಕಿಸಿ ಇತರ ಭಾಗಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.