ಕುದುರೆಮುಖ-ಕಾರ್ಕಳ ಮಧ್ಯೆ ಕಡಂಬಿ ಜಲಪಾತ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿ ಬಿದ್ದು ಸುಮಾರು ನಾಲ್ಕು ಗಂಟೆಗಳಿಗೂ ಅಧಿಕ ರಸ್ತೆ ಸಂಚಾರ ಕಡಿತಗೊಂಡಿತ್ತು.ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಪೂಣ್ ಬಂದ್ ಆಗಿತ್ತು.ಸ್ಥಳದಲ್ಲಿ ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕುದುರೆಮುಖಕ್ಕೆ ಬಂದು ಅರಣ್ಯ ಇಲಾಖೆಗೆ ಸುದ್ಧಿ ಮುಟ್ಟಿಸಿದ ನಂತರ ಮರವನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಸುಮಾರು ಎರಡು ಕಿ.ಮೀ ದೂರ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.ರಸ್ತೆಯುದ್ದಕ್ಕೂ ಮರಗಳು ರಸ್ತೆಗೆ ಭಾಗಿ ನಿಂತಿದ್ದು,ಈ ಮರಗಳನ್ನು ಅರಣ್ಯ ಇಲಾಖೆ ತೆರವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.