ಕಳಸ ತಲೂಕಿನಲ್ಲಿ ಮಳೆ ಮುಂದುವರೆದಿದ್ದು, ಅತಿಯಾದ ಗಾಳಿ ಮಳೆಗೆ ತನೂಡಿ ಉಮೇಶ ಎಂಬುವವರ ಮನೆ ಕುಸಿದಿದೆ.
ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತನೂಡಿ ಗ್ರಾಮದಲ್ಲಿ ಸೋಮವಾರದ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಉಮೇಶ ಮತ್ತು ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಸುದ್ಧಿ ತಿಳಿಯುತ್ತಿದ್ದಂತೆ ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.