ಕಳಸ-ಕೊಟ್ಟಿಗೆಹಾರ ಮುಖ್ಯ ರಾಜ್ಯ ಹೆದ್ದಾರಿಯ ಕಲ್ಮಕ್ಕಿ ಎಂಬಲ್ಲಿ ಕುಸಿದಿದ್ದ ರಸ್ತೆಯನ್ನು ಗುರುವಾರ ತಾತ್ಕಾಲಿಕ ದುರಸ್ಥಿ ಮಾಡಲಾಗಿದೆ.
ಬುಧವಾರ ರಸ್ತೆ ಕುಸಿದ ಹಿನ್ನಲೆಯಲ್ಲಿ ಕಲ್ಮಕ್ಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿ ಕೂಡಲೇ ದುರಸ್ಥಿ ಪಡಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಕೂಡ ನೀಡಿದ್ದರು.ಈ ಬಗ್ಗೆ ಕಳಸ ಲೈವ್ ಸುದ್ದಿಯನ್ನು ಪ್ರಸಾರ ಮಾಡಿತ್ತು.ಇದೀಗ ಲೋಕೋಪಯೋಗಿ ಇಲಾಖೆ ರಸ್ತೆ ಕುಸಿದ ಸ್ಥಳಕ್ಕೆ ಜಲ್ಲಿ ಹಾಕಿ ಮುಚ್ಚುವ ಕಾರ್ಯ ಮಾಡಿದೆ.