ಸುಳ್ಯದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ಜು 29 ಶುಕ್ರವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಳಸ ಬಂದ್ಗೆ ಕರೆ ನೀಡಿದೆ.
ಬಜರಂಗದಳ ಜಿಲ್ಲಾ ಗೋ ರಕ್ಷಕ ಪ್ರಮುಖ್ ಅಜಿತ್ ಕುಳಾಲ್ ಮಾತನಾಡಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್ ನೆಟ್ಟಾರ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ರಾಜ್ಯ ಸರ್ಕಾರ ಕೊಲೆಗಡುಕರನ್ನು ಬಂಧಿಸಬೇಕು, ಸರ್ಕಾರ ನ್ಯಾಯ ಒದಗಿಸಬೇಕೆಂದು ಕಳಸ ಬಂದ್ ಗೆ ಕರೆ ನೀಡಲಾಗಿದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.