ಕಳಸ ತಾಲ್ಲೂಕಿನಾಧ್ಯಂತ 75 ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಸೋಮವಾರ ಕಳಸ ಕೆಪಿಎಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ತಹಶೀಲ್ದಾರ್ ನಂದಕುಮಾರ್,ವಿವಿಧ ಪಕ್ಷಗಳ ಮುಖಂಡರುಗಳು ಹಾಗೂ ಅಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಮಾತನಾಡಿ ಕಳಸ ತಾಲ್ಲೂಕು ಕೇಂದ್ರವಾದ ಮೇಲೆ ಪ್ರಥಮ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.ಅಲ್ಲದೆ 75 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಇರುವ ಹಿನ್ನಲೆಯಲ್ಲಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳು,ಸರ್ಕಾರಿ ಹಾಗೂ ಖಾಸಾಗಿ ಕಛೇರಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು.ಪ್ರತೀ ಮನೆ ಮನೆಯಲ್ಲೂ ರಾಷ್ಟ್ರ ದ್ವಜ ಹಾರಿಸಬೇಕು.ಕಾರ್ಯಕ್ರಮವು ಕಳಸ ಕೆಪಿಎಸ್ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ನಡೆಯಲ್ಲಿದ್ದು, ಎಲ್ಲಾ ಸÀಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು.ಪ್ರತಿಯೊಂದು ಶಾಲಾ ಕಾಲೇಜುಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಬೇಕು.ವಿವಿಧ ಇಲಾಖೆಗಳು ಮತ್ತು ಶಾಲಾ ಕಾಲೇಜುಗಳಿಂದ ಟ್ಯಾಬ್ಲೋಗಳನ್ನು ಮಾಡಬೇಕು.ಈ ಅದ್ದೂರಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಗುರುತಿಸಬೇಕು.
ಎರಡನೇ ಪೂರ್ವಭಾವಿ ಸಭೆಯು ಆ 8 ರ ಸೋಮವಾರದಂದು ಕೆಪಿಎಸ್ ಪ್ರೌಢ ಶಾಲಾ ಸಭಾಂಗಣದಲ್ಲಿ 10 ಗಂಟೆಗೆ ನಡೆಯಲಿದ್ದು, ಅಂದು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು,ಶಾಲಾ ಕಾಲೇಜಿನ ಮುಖ್ಯ ಶಿಕ್ಷಕರು ಭಾಗವಿಸಬೇಕು ಎಂದು ಕೇಳಿಕೊಂಡರು.