ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವನಳ್ಳ ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಿ.ಪಿ.ಚಂದ್ರು ತನ್ನ 50 ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬುಧವಾರ ಕವನಳ್ಳ ಗ್ರಾಮಕ್ಕೆ ಆಗಮಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಡಾ.ಅಂಶುಮಂತ್ ಮತ್ತು ಸುಧೀರ್ ಕುಮಾರ್ ಮುರೋಳ್ಳಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.
ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿ ಇದ್ದ ಚಂದ್ರು,ಈ ಹಿಂದೆ ಹೊರನಾಡು ಗ್ರಾಮ ಪಂಚಾಯಿತಿ ಆದ್ಯಕ್ಷರಾಗಿದ್ದರು.ಅವರ ಪತ್ನಿ ಕವಿತಾ ಚಂದ್ರು ಜಿಲ್ಲಾ ಪಂಚಾಯಿತಿ ಸದಸ್ಯರೂ ಆಗಿದ್ದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದಿಂದ ಶ್ರೀನಿವಾಸ ಅವರು ತನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಶ್ರೀನಿವಾಸ್ ಅವರ ಪತ್ನಿ ವಿನೋದ ಈ ಹಿಂದೆ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿದ್ದರು.
ಈ ಸಂದರ್ಭದಲ್ಲಿ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎ.ಶ್ರೇಣಿಕ,ಕಾಂಗ್ರೆಸ್ ಮುಖಂಡರಾದ ರಾಜೇಂದ್ರ ಹಿತ್ತಲಮಕ್ಕಿ,ಮರಸಣಿಗೆ ವಿಶ್ವನಾಥ್,ಮಹಮ್ಮದ್ ರಫೀಕ್,ಶ್ರೀಮತಿ ಪುಷ್ಪಾ ರಾಮು,ಕೆ.ಸಿ.ಮಹೇಶ್,ವೀರೇಂದ್ರ ಜೈನ್,ಮಧುಪ್ರಸಾದ್,ರವಿರಾಜ್ ಇದ್ದರು.