ಕಳಸ ತಾಲ್ಲೂಕಿನಾಧ್ಯಂತ ಬುಧವಾರ ಬೆಳಿಗ್ಗೆ ಸುರಿದ ಮಳೆಗೆ ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತನೂಡಿಯಲ್ಲಿ ರಸ್ತೆ ಕೊಚ್ಚಿಹೋಗಿದೆ.
ಸುಮಾರು 50 ಮನೆಗಳಿರುವ ಪ್ರದೇಶಗಳಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ.ಆದರೆ ಈಗ ರಸ್ತೆಯೇ ಕೊಚ್ಚಿ ಹೋಗಿರುವ ಹಿನ್ನಲೆಯಲ್ಲಿ ಯಾವುದೇ ವಾಹನ ಸಂಚಾರ ಮಾಡದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮಸ್ಥರು ತೊಂದರೆ ಪಡುವಂತಾಗಿದೆ ಎಂದು ತನೂಡಿಯ ಸುದರ್ಶನ್ ಹೇಳುತ್ತಾರೆ.