ಕಳಸ:(ಕಳಸ ಲೈವ್ ವರದಿ)
ಶ್ರೀ ಮಹಾಗಣಪತಿ ಮತ್ತು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಮುನ್ನೂರ್ ಪಾಲ್ ನಲ್ಲಿ ಸೆ 26 ರಿಂದ ಅ 5 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.
ಪ್ರತೀ ದಿನ ಬೆಳಿಗ್ಗೆ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದ್ದು, ಅಕ್ಟೋಬರ್ 5ರಂದು ಶ್ರೀ ಚಂಡಿಕಾ ಹೋಮ ನಡೆಯಲಿದೆ.
ಅಂದು ಸಾಂಸ್ಕøತಿಕ ಕಾರ್ಯಕ್ರಮ ಅಂಗವಾಗಿ ಸಂಜೆ 5 ಗಂಟೆಯಿಂದ ಶ್ರೀಮತಿ ಕಾವ್ಯಶ್ರೀ ನಾಯಕ್, ಅಜೇರು ಮತ್ತು ತಂಡದವರಿಂದ ಗುರು ಕಾಣಿಕೆ ಎಂಬ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.