ಕಳಸ ಲೈವ್ ವರದಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಒಳ್ಳೆಯ ಗುಣನಡೆತೆಯನ್ನು ರೂಢಿಸಿಕೊಳ್ಳಬೇಕು ಎಂದು ಉದ್ಯಮಿ ಕೆ.ಕೆ.ಬಾಲಕೃಷ್ಣ ಭಟ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದ ಕಾರ್ಯಕ್ರಮಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಕಾಲೇಜಿನ ಮೂಲಸೌಕರ್ಯಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಇತ್ತೀಚಿನ ಶೈಕ್ಷಣಿಕ ಸಾಧನೆಗಳು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿವೆ. ಇದಕ್ಕಾಗಿ ಶ್ರಮಿಸುತ್ತಿರುವ ಕಾಲೇಜಿನ ಬೋಧಕವರ್ಗ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲರೂ ಅಭಿನಂದನಾರ್ಹರು. ಸ್ಥಳೀಯ ದಾನಿಗಳು, ಜನಪ್ರತಿನಿಧಿಗಳ ಸಹಕಾರದಿಂದ ಕಾಲೇಜಿನಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಒದಗಿಸುವುದರೊಂದಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆ. ವಿದ್ಯಾರ್ಥಿಗಳು ಕೂಡ ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಯಾ ಸದಾನಂದ ಮಾತನಾಡಿ “ನಮ್ಮ ಊರಿನ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಗುಣಮಟ್ಟದ ಪದವಿ ಶಿಕ್ಷಣ ದೊರಕಿಸುವುದು ಕಾಲೇಜು ಅಭಿವೃದ್ಧಿ ಸಮಿತಿಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕಾಲೇಜಿಗೆ ಅಗತ್ಯವಾಗಿದ್ದ ಸಂಪರ್ಕ ರಸ್ತೆ ದುರಸ್ತಿ, ನೂತನ ರ್ಯಾಂಪ್, ಉದ್ಯಾನವನ ಅಭಿವೃದ್ಧಿ, ಬೋರ್ವೆಲ್, ಹೆಚ್ಚುವರಿ ತರಗತಿ ಕೊಠಡಿಗಳು ಮತ್ತು ಕಂಪ್ಯೂಟರ್ ಲ್ಯಾಬ್ ಅನ್ನು ನಿರ್ಮಿಸಲಾಗಿದೆ ಎಂದರು.
ಕಾಲೇಜಿನ ಅಭಿವೃದ್ದಿ ಮತ್ತು ಸಹಕಾರ ನೀಡಿದ ಶ್ರೀ ಅನ್ನಪೂರ್ಣೇಶ್ವರಿ ಮೋಟಾರ್ಸ್ ಮಾಲಿಕ ಕೆ.ಕೆ. ಬಾಲಕೃಷ್ಣ, ಯೋಗ ಗುರು ಪ್ರೇಮ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಯಾ ಸದಾನಂದ ಮತ್ತು ಸಿ.ಡಿ.ಸಿ ಕಾರ್ಯಾಧ್ಯಕ್ಷ ಪ್ರಸಿದ್ಧ ಜೈನ್ ರವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು ಹಾಗೂ ಕಾಲೇಜು ಮಟ್ಟದ ಸಾಂಸ್ಕøತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನನ್ನು ವಿತರಿಸಲಾಯಿತು.
ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರತಿ ರವೀಂದ್ರ, ಸಿ.ಡಿ.ಸಿ ಕಾರ್ಯಾದ್ಯಕ್ಷ ಪ್ರಸಿದ್ಧ ಜೈನ್, ಸದಸ್ಯ ಬಾಲಕೃಷ್ಣ ಪ್ರಭು, ಪೋಷಕರ ವೇದಿಕೆ ಅಧ್ಯಕ್ಷ ಅಜಿತ್ ಪ್ರಸಾದ್ ಜೈನ್, ಉಪಾಧ್ಯಕ್ಷ ರಾಮಚಂದ್ರ ಗೌಡ, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರಾದ ವಿಶು ಕುಮಾರ್ ಎನ್ ಉಪನ್ಯಾಸಕರಾದ ಡಾ. ಆದಿತ್ಯ ಅಡಿಗ ಎ.ಜಿ, ಸುಧೀರ್ ಜೈನ್ ಎಂ.ಎಸ್, ಸೋಮಶೇಖರ್, ಸಂತೋಷ್ ಕೆ.ಬಿ. ವಿದ್ಯಾರ್ಥಿಗಳಾದ ಚಿಂತನ್ ಎಸ್.ಆರ್, ಸುರಭಿ ಜೈನ್, ಕಾವ್ಯ ಮತ್ತು ಕವನ ಉಪಸ್ಥಿತರಿದ್ದರು.