ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಹೊರನಾಡಿನ ಜಗನ್ಮಾತೆ ಅನ್ನಪೂರ್ಣೇಶ್ವರಿಯ ಸನ್ನಿಧಿಯಲ್ಲಿ ಸೋಮವಾರ ಶ್ರೀ ಶರನ್ನವರಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಸೋಮವಾರ ಶ್ರೀ ಮಾತೆಗೆ ವಿಶೇಷ ಅಲಂಕಾರಗಳೊಂದಿಗೆ ಜಗಜ್ಜನನೀ ದುರ್ಗಾದೇವಿಯ ಮೊದಲನೆ ಸ್ವರೂಪ ಹಂಸರೂಢ ಸರಸ್ವತಿಯ ರೂಪದಲ್ಲಿ ಮಾತೆ ಅನ್ನಪೂರ್ಣೇಶ್ವರಿ ಕಂಗೊಳಿಸಿದಳು.
ಬೆಳಿಗ್ಗೆ ಘಂಟೆ 6.30ರ ಸಮಯಕ್ಕೆ ಸರಿಯಾಗಿ ನವರಾತ್ರಿಯ ಪೂಜಾ ವಿಧಿ ವಿಧಾನಗಳು ಪ್ರಾರಂಭಗೊಂಡವು. ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರಕಾಂಡ ಪಾರಾಯಣ,ಕುಂಕುಮಾರ್ಚನೆ ಪೂಜೆಗಳು ನೆರವೇರಿದವು. ಬೆಳಿಗ್ಗೆ 8.30ಕ್ಕೆ ಶ್ರೀ ಪಂಚದುರ್ಗಾ ಹೋಮ ನಡೆಯಿತು.ಹೋಮದ ಪೂರ್ಣಾಹುತಿಯನ್ನು ದೇವಸ್ಥಾನದ ಧರ್ಮಕರ್ತರಾದ ಡಾ|ಜಿ.ಭೀಮೇಶ್ವರ ಜೋಷಿ ದಂಪತಿಗಳು ನೆರವೇರಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಪಿ.ಶಶಿಧರ ಬೆಂಗಳೂರು ಇವರಿಂದ ಭಕ್ತಿ ಗೀತೆ, ನಡೆಯಿತು.
ಸೆ 27 ರಂದು ಗಜಾರೂಢಾ ಬ್ರಹ್ಮಚಾರಿಣೀ ಅಲಂಕಾರ ಪೂಜೆ. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ಮೂಲಮಂತ್ರ ಹೋಮ. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸುಪ್ರಿಯಾ ಜೋಷಿ ಮತ್ತು ತಂಡ ಬೆಂಗಳೂರು ಇವರಿಂದ ಭಕ್ತಿ ಸಂಗೀತ, ಸಂಜೆ ಭವತಿ ನೃತ್ಯ ತಂಡ ಬೆಂಗಳೂರು ಇವರಿಂದ ಭರತ ನಾಟ್ಯ ನಡೆಯಲಿದೆ.