ಕಳಸ ಲೈವ್ ವರದಿ
ಕಳಸ ಸಾರ್ವಜನಿಕ ಶ್ರೀ ದುರ್ಗಾಪೂಜಾ ಸಮಿತಿಯಿಂದ ನಡೆಯುವ 34ನೇ ವರ್ಷದ ಸಾರ್ವಜನಿಕ ಶ್ರೀ ದುರ್ಗಾಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಬೆಳಿಗ್ಗೆ ಶ್ರೀ ಕಲಶೇಶ್ವರ ಸ್ವಾಮಿಗೆ ಶತರುದ್ರಾಭಿಷೇಕ ಹಾಗೂ ಗಿರಿಜಾಂಬಾ ದೇವಸ್ಥನದಲ್ಲಿ ಸಾನಿಧ್ಯ ಕಲಶಾಭಿಷೇಕ, ಸಪ್ತಶತೀ ಪಾರಾಯಣ, ಗಣಹೋಮ ನೆರವೇರಿದ ಬಳಿಕ ದುರ್ಗಾಮಂಟಪದಲ್ಲಿ ಶ್ರೀ ದುರ್ಗಾದೇವಿಯ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು.
ಸಂಜೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಭವತಿನೃತ್ಯ ಬೆಂಗಳೂರು ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಸೆ 27 ರಂದು ಸಂಜೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಸಹಪ್ರಯೋಜಕತ್ವದಲ್ಲಿ ತುಳುನಾಡ ಗಾನಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ, ಕಲರ್ಸ್ ಕನ್ನಡ ಖ್ಯಾತಿಯ, ಅಂತರ್ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.