ಕಳಸ ಲೈವ್ ವರದಿ
ಶ್ರಿ ಕ್ಷೇತ್ರ ಹೊರನಾಡು ಅನ್ನಪೂಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ|ಜಿ.ಭೀಮೇಶ್ವರ ಜೋಷಿ ಅವರ ಪಟ್ಟಾಭಿಷೇಕೋತ್ಸವ ದಿನದ ಅಂಗವಾಗಿ ಶುಕ್ರವಾರ ನಡೆದ ಜೀವ-ಭಾವ ಹಾಗೂ ಶ್ರೀ ಮಾತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮಿಗಳು ಹಾಗೂ ಅಧ್ಯಕ್ಷತೆಯನ್ನು ಡಾ|ಜಿ.ಭೀಮೇಶ್ವರ ಜೋಷಿ ವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರೇರಣ ವಿಶೇಷ ಚೇತನರ ಟ್ರಸ್ಟ್ ಸ್ವರ್ಣಸಂದ್ರ ಮಂಡ್ಯ ಇವರಿಗೆ ಒಂದು ಲಕ್ಷ ರೂ ಜೊತೆ ಶ್ರೀ ಮಾತಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತ ಬ್ರಾಹ್ಮಣ ಸಮಾಜದ ನಿರ್ದೇಶಕ ಡಾ|ರಾಘವೇಂದ್ರ ಭಟ್, ಪ್ರೇರಣ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರವಿ ಕುಮಾರ್, ಕಾರ್ಯದರ್ಶಿ ಶ್ರೀಧರ್, ರಾಜಲಕ್ಷ್ಮೀ ಬಿ ಜೋಷಿ, ಗಿರಿಜಾ ಶಂಕರ ಜೋಷಿ.