ಕಳಸ ಲೈವ್ ವರದಿ
ತೋಟದೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಅಧಿಕಾರಿಗಳು ಗೈರಾದ ಹಿನ್ನಲೆಯಲ್ಲಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಗ್ರಾಮ ಸಭೆಯನ್ನು ರದ್ದು ಪಡಿಸಿ ಮುಂದೂಡಲಾಗಿದೆ.
ಆರೋಗ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಗೈರಾಗಿದ್ದರು.
ಈ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತ ಪಡಿಸಿ ಗ್ರಾಮಸ್ಥರಿಗೆ ಸಮರ್ಪಕವಾಗಿ ಮಾಹಿತಿ ಮತ್ತು ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರ ನೀಡಬೇಕಾದ ಅಧಿಕಾರಿಗಳು ಗೈರಾದರೆ ಈ ಗ್ರಾಮ ಸಭೆ ಯಾತಕ್ಕಾಗಿ ನಡೆಸುತ್ತೀರಿ. ಕೇವಲ ನಾಮಕಾವಸ್ಥೆಗೆ ಮಾಡಿ ಮುಗಿಸುವ ಸಲುವಾಗಿ ಗ್ರಾಮ ಸಭೆ ನಡೆಸುವುದು ಬೇಡ ಎಲ್ಲಾ ಅಧಿಕಾರಿಗಳನ್ನು ಕರೆಸಿ ಗ್ರಾಮ ಸಭೆ ನಡೆಸಿ ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಮಸ್ಥರ ಒತ್ತಾಯದ ಮೇರೆಗೆ ನೋಡಲ್ ಅಧಿಕಾರಿಯಾಗಿದ್ದ ವೀರೇಶ್ ಮಾಚೆ ಗೌಡ ಗ್ರಾಮ ಸಭೆಯನ್ನು ರದ್ದು ಪಡಿಸಿ ಮುಂದೂಡಿದರು.