ಕಳಸ ಲೈವ್ ವರದಿ
ಕಳಸ ತಾಲ್ಲೂಕಿನಾದ್ಯಂತ ತಾಲ್ಲೂಕು ಆಡಳಿತ, ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.
ಕಳಸ ತಾಲ್ಲೂಕು ಆಡಳಿತದಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ರಾಷ್ಟ್ರ ದ್ವಜಾರೋಹಣವನ್ನು ಕಳಸ ತಾಲ್ಲೂಕು ದಂಡಾಧಿಕಾರಿ ನಂದಕುಮಾರ್ ನೆರವೇರಿಸಿದರು.
ಪೊಲೀಸ್ ಇಲಾಖೆ, ಮತ್ತು ಕಳಸದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ನಂತರ ಕಳಸದ ಮುಖ್ಯ ರಸ್ತೆಯಲ್ಲಿ ಶಾಲಾ ಕಾಲೇಜು ವಿಧ್ಯಾರ್ಥಿಗಳ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಹಲವಾರು ಸ್ತಬ್ಧ ಚಿತ್ರಗಳು ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ, ಕುದುರೆಮುಖ ವೃತ್ತ ನಿರೀಕ್ಷಕ ರಮೇಶ್ ಇದ್ದರು.
ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕಚೇರಿ ಮುಂಭಾಗ ಕರವೇ ಅಧ್ಯಕ್ಷ ಕೆ.ಎ.ಶ್ರೇಣಿಕ್ ದ್ವಜಾರೋಹಣ ನಡೆಸಿದರು. ಕಳಸ ಆಟೋ ಚಾಲಕ ಮತ್ತು ಮಾಲಕರ ಸಂಘ, ಬಾಳೆಹೊಳೆ ಆಟೋ ಮಾಲಕರ ಮತ್ತು ಚಾಲಕರ ಸಂಘ, ಹಿರೇಬೈಲು ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ನಡೆಸಲಾಯಿತು.
ಕಳಸ ಪ್ರಥಮ ದರ್ಜೆ ಕಾಲೇಜು, ಪಿಯು ಕಾಲೇಜು, ಕೆಪಿಎಸ್, ಪ್ರಬೋಧಿನಿ ವಿದ್ಯಾ ಕೇಂದ್ರ, ಜೆಇಎಂ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ ಸಿಹಿ ಹಂಚಲಾಯಿತು.