ಕಳಸ ಲೈವ್ ವರದಿ
ಕಳಸ ತಾಲ್ಲೂಕು ಕೇಂದ್ರ ಆದ ನಂತರ ನಡೆದ ಮೊದಲ ಕನ್ನಡ ರಾಜ್ಯೋತ್ಸವದಲ್ಲಿ ತಾಲ್ಲೂಕು ಆಡಳಿತದ ವಿರುದ್ದ ಕನ್ನಡಪರ ಸಂಘಟನೆಗಳು ಅಸಮಾದಾನ ವ್ಯಕ್ತ ಪಡಿಸಿದ್ದಾರೆ.
ರಾಜ್ಯೋತ್ಸವದ ಕೆಲ ದಿನಗಳ ಮೊದಲು ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡಪರ ಸಂಘಟನೆಗಳ ಜೊತೆ ತಾಲ್ಲೂಕು ಅಡಳಿತ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪು ರೇಷೆಗಳನ್ನು ಮಾಡಿತ್ತು. ಆದರೆ ಸಭೆಯಲ್ಲಿ ನಡೆದಿರುವ ಎಲ್ಲಾ ವಿಷಯಗಳನ್ನು ಬದಿಗೊತ್ತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅ.ರಾ. ಸತೀಶ್ಚಂದ್ರ ಬೇಸರ ವ್ಯಕ್ತ ಪಡಿಸಿದ್ದಾರೆ.
ಸಾಹಿತ್ಯ ಪರಿಷತ್ತಿಗೆ ಗೌರವ ನೀಡದೆ ಇರುವುದು ನಾಡು-ನುಡಿಗೆ ಮಾಡಿದ ಅವಮಾನವಾಗಿದೆ ಆದ್ದರಿಂದ ದ್ವಜವಂದನೆ ಹೊರತು ಪಡಿಸಿ ಬೇರೆ ಯಾವ ಕಾರ್ಯಕ್ರಮಕ್ಕೂ ಭಾಗವಹಿಸಿಲ್ಲ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ಆಡಳಿತದ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಎ.ಶ್ರೇಣಿಕ್ ಅಸಮದಾನ ವ್ಯಕ್ತ ಪಡಿಸಿದ್ದಾರೆ.
ಕನ್ನಡಪರ ಸಂಘಟನೆಗಳನ್ನು ದೂರ ಇಟ್ಟು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಗಿದೆ. ಇದು ಕನ್ನಡ ನಾಡು ನುಡಿಗೆ ಮಾಡಿದ ಅವಮಾನವಾಗಿದೆ. ಎಲ್ಲರನ್ನೂ ಒಗ್ಗೂಡಿಸಿ ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಬಹುದಾಗಿತ್ತು ಆದರೆ ಇಲ್ಲಿ ಕಾಟಚಾರಕ್ಕೆ ರಾಜ್ಯೋತ್ಸವ ಕಾರ್ಯಕ್ರಮ ಮಾಡಲಾಗಿದೆ.
ಇದರಿಂದ ಬೇಸೆತ್ತ ನಾವುಗಳು ಕಾರ್ಯಕ್ರಮಕ್ಕೆ ಭಾಗವಹಿಸಲಿಲ್ಲ ಎಂದು ತಿಳಿಸಿದ್ದಾರೆ.