ಕಳಸ ಲೈವ್ ವರದಿ
ಕಳಸದಿಂದ ಹಿರೇಬೈಲು ಕಡೆ ಹೋಗುವ ಮಾರುತಿ 800 ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಗುರುವಾರ ಸಂಜೆ ನಡೆದಿದೆ.
ದಾರವಾಡದಿಂದ 5 ಜನ ಮೂರು ಬೈಕಿನಲ್ಲಿ ಧರ್ಮಸ್ಥಳಕ್ಕೆ ತೆರಳಿ ಅಲ್ಲಿಂದ ಹೊರನಾಡಿಗೆ ಬರುವಾಗ ಹಿರೇಬೈಲ್ ಸಮೀಪ ಈ ಘಟನೆ ನಡೆದಿದ್ದು, ಬೈಕ್ ಸವಾರ ಬಸವರಾಜ್ ಎಂಬುವವರ ಕಾಲಿಗೆ ಗಂಭೀರ ಗಾಯವಾಗಿದೆ.
ಕೂಡಲೇ ಕಳಸ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.