ಕಳಸ ಲೈವ್ ವರದಿ
ಕಳಸ ಪಟ್ಟಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದು ಗಾಯವಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕಳಸ ಪೊಲೀಸ್ ಠಾಣಾ ಸಿಬ್ಬಂದಿ ಬಸವರಾಜ್ ಗುಂಡ್ಲುರು ಅವರು ರಾತ್ರಿ 9ರ ಸಮಯದಲ್ಲಿ ಕಳಸ ದೇವಸ್ಥಾನದ ಸಮೀಪ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ವೆಗನರ್ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆ, ಮುಖಕ್ಕೆ ಗಾಯವಾಗಿತ್ತು . ಕೂಡಲೇ ಅವರನ್ನು ಕಳಸ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Related Stories
September 6, 2024