ಕಳಸ ಲೈವ್ ವರದಿ
ಕುವೆಂಪು ವಿ ವಿ ಸಿಂಡಿಕೇಟ್ ಸದಸ್ಯರಾಗಿ ಕಳಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಮುಂದಿನ ಒಂದು ವರ್ಷದ ಅವಧಿಗೆ ಅವರು ಸದಸ್ಯರಾಗಿ ಕೆಲಸ ಮಾಡಲಿದ್ದಾರೆ.
2017ರಲ್ಲಿ ಕಳಸ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ಬಂದು ನಂತರದ ದಿನಗಳಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ತನ್ನ ಐದು ವರ್ಷ ನಾಲ್ಕು ತಿಂಗಳ ಅವಧಿಯಲ್ಲಿ ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ದುಡಿಯುತ್ತಿರುವ ಇವರು ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ತರ ಪಾತ್ರ ವಹಿಸಿದ್ದಾರೆ.
ಕೇವಲ ಕಾಲೇಜಿನ ಅಭಿವೃದ್ಧಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟದಲ್ಲಿ ಸಾಕಷ್ಟು ಸುಧಾರಣೆಗಳನ್ನು ಕಂಡುಕೊಂಡಿರುವುದಕ್ಕೆ ಕಳೆದ ಮೂರು ವರ್ಷಗಳಿಂದ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಮಾಡಿರುವ ಸಾಧನೆಗಳೆ ಸಾಕ್ಷಿಯಾಗಿ ನಿಂತಿದೆ.
ಇದೀಗ ವಿನಯ್ ಕುಮಾರ್ ಶೆಟ್ಟಿ ಗೆ ಕುವೆಂಪು ವಿ ವಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವುದಕ್ಕೆ ಕಾಲೇಜು ಅಭಿವೃದ್ಧಿ ಮಂಡಳಿ, ಬೋಧಕ ವರ್ಗ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
Related Stories
September 6, 2024