ಕಳಸ ಲೈವ್ ವರದಿ
ಫೆಬ್ರವರಿ ತಿಂಗಳಿನಲ್ಲಿ ಕಳಸ ತಾಲೂಕು ಉತ್ಸವ ಮಾಡುವ ಬಗ್ಗೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಳಸ ತಾಲೂಕು ಉತ್ಸವ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು. ಕಳಸ ಕೆಪಿಎಸ್ ಶಾಲಾ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ ಕಳಸ ಉತ್ಸವ ಮೆರವಣಿಗೆ, ಸಂಜೆ ಸಭಾ ಕಾರ್ಯಕ್ರಮ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಕಳಸ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸರ್ವ ಪಕ್ಷಗಳು, ಸಂಘ ಸಂಸ್ಥೆಗಳ ಒಗ್ಗೂಡುವಿಕೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಜನವರಿ 23ರ ಸೋಮವಾರದಂದು 11 ಗಂಟೆಗೆ ದುರ್ಗಾ ಮಂಟಪದಲ್ಲಿ ಮತ್ತೊಂದು ಪೂರ್ವಭಾವಿ ಸಭೆಯನ್ನು ನಡೆಸಿ ಅದರಲ್ಲಿ ಉತ್ಸವ ಸಮಿತಿಯನ್ನು ಮಾಡಿ ಅದರಲ್ಲಿ ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಈ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಕಳಸ ತಹಶಿಲ್ದಾರ್ ನಂದಕುಮಾರ್,ಉಪ ತಹಶಿಲ್ದಾರ್ ಹೇಮಂತ್ ಕುಮಾರ್, ಕಳಸ ಗ್ರಾಮ ಪಂಚಾಯತಿ ಅಧ್ಯಕ್ಷ ಸುಜಯ ಸದಾನಂದ, ಬಿಜೆಪಿ ಅಧ್ಯಕ್ಷ ನಾಗಭೂಷಣ್, ಹೆಮ್ಮಕಿ ಗಿರೀಶ್, ರಂಗನಾಥ್, ಕಾರ್ತಿಕ್ ಶಾಸ್ತ್ರಿ, ಪಿಎಸ್ಐ ಹರ್ಷವರ್ಧನ್ ಕಸಾಪ ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಶಾಲಾ ಕಾಲೇಜುಗಳ ಮುಖ್ಯ ಶಿಕ್ಷಕರುಗಳು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.