ಕಳಸ ಲೈವ್ ವರದಿ
ಕಳಸ ತಾಲೂಕಿನಾದ್ಯಂತ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಳಸ ತಾಲೂಕು ಆಡಳಿತ ವತಿಯಿಂದ ಕಳಸ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ದಂಡಾಧಿಕಾರಿ ನಂದಕುಮಾರ್ ರಾಷ್ಟ್ರದ್ವಜಾರೋಹಣ ಮಾಡಿದರು. ಕಳಸ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯಸದಾನಂದ, ಕುದುರೆಮುಖ ವೃತ್ತ ನಿರೀಕ್ಷಕ ರಮೇಶ್ ಕುಮಾರ್ ಇದ್ದರು.
ಕಳಸ, ಸಂಸೆ, ಹೊರನಾಡು, ಇಡಕಣಿ, ಮರಸಣಿಗೆ, ತೋಟದೂರು ಗ್ರಾಮ ಪಂಚಾಯಿತಿಗಳಲ್ಲಿ ದ್ವಜಾರೋಹಣ ನಡೆಸಲಾಯಿತು. ನಾಡ ಕಛೇರಿ ,ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ, ಅರಣ್ಯ ಇಲಾಖೆ, ಶಾಲಾ ಕಾಲೇಜುಗಳಲ್ಲಿ ದ್ವಜಾರೋಹಣ ನೆರವೇರಿಸಿ ಸಿಹಿತಿಂಡಿ ಹಂಚಲಾಯಿತು.
ಪ್ರಬೋಧಿನಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು.