ಕಳಸ ಲೈವ್ ವರದಿ
ಕಳಸದಲ್ಲಿ ಮಾರ್ಚ್ 10,11ರಂದು 18 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಕಳಸ ಪಟ್ಟಣದಲ್ಲಿ ಶನಿವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾಣ ತೆಗೆದುಕೊಂಡಿದ್ದು, ನೂತನವಾಗಿ ಆಗಿರುವ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳವನ್ನು ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ತಿಳಿಸಿದ್ದೆ. ಅದರಂತೆ ಕಳೆದ ವರ್ಷ ಹೊಸ ತಾಲ್ಲೂಕು ಅಜ್ಜಂಪುರದಲ್ಲಿ ಜಿಲ್ಲಾ ಸಮ್ಮೇಳನವನ್ನು ಮಾಡಲಾಗಿತ್ತು. ಈ ಬಾರಿ ಕಳಸ ತಾಲೂಕಿನಲ್ಲಿ ಜಿಲ್ಲಾ ಸಮ್ಮೇಳವನ್ನು ಮಾಡುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಎಲ್ಲಾ ಪಕ್ಷಗಳ ಮುಖಂಡರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಸಮ್ಮೇಳನವನ್ನು ಮಾಡಲಾಗುತ್ತದೆ.
ಈ ಬಗ್ಗೆ ಕೂಡಲೇ ವಿವಿಧ ಸಮಿತಿಗಳನ್ನು ರಚಿಸಲಾಗುತ್ತದೆ. ಸಮ್ಮೇಳನದಲ್ಲಿ ಸಮ್ಮೇಳನದ ಮೆರವಣಿಗೆ, ಗೋಷ್ಠಿಗಳು, ಪುಸ್ತಕ ಬಿಡುಗಡೆ, ಸಾಂಸ್ಕøತಿಕ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳು, ಆಹಾರ ಮಳಿಗೆಗಳು ಇರಲಿವೆ ಎಂದು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕಳಸ ತಾಲ್ಲೂಕು ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಚಿಕ್ಕಮಗಳೂರು ಕಸಬಾ ಅಧ್ಯಕ್ಷ ಸೋಮಶೇಖರ್, ಶ್ರಿಂಗೇರಿ ತಾಲ್ಲೂಕು ಅಧ್ಯಕ್ಷ ಶ್ರಿಂಗೇರಿ ಸುಬ್ಬಣ್ಣ, ಕಳಸ ತಾಲ್ಲೂಕು ಮಹಿಳಾ ಅಧ್ಯಕ್ಷೆ ಮಮ್ತಾಜ್ ಬೇಗಂ, ಜಿಲ್ಲಾ ಸಂಚಾಲಕ ಪಾಂಡುರಂಗ, ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ, ಸಾಹಿತಿ ಅ.ರಾ.ರಾಧಕೃಷ್ಣ ಇತರರು ಇದ್ದರು.