ಕಳಸ ಲೈವ್ ವರದಿ
ಚಿಕ್ಕಮಗಳೂರು ಜಿಲ್ಲೆಯ 18 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕಳಸ ತಾಲ್ಲೂಕಿನಲ್ಲಿ ಪೆ 27 ಮತ್ತು 28ರಂದು ನಡೆಯಲಿದೆ.
ಇದರ ಅಂಗವಾಗಿ 18 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಜಿ.ಭೀಮೇಶ್ವರ ಜೋಷಿಯವರು ಹಾಗೂ ಮೂಡಿಗೆರೆ ತಾಲ್ಲೂಕು ಶಾಸಕರಾದ ಎಂ.ಪಿ.ಕುಮಾರಸ್ವಾಮಿಯವರು ಮತ್ತು ಕ.ಸಾ.ಪ ಜಿಲ್ಲಾದ್ಯಕ್ಷರಾದ ಸೂರಿ ಶ್ರೀನಿವಾಸ್ ಅವರುಗಳು ಜಂಟಿಯಾಗಿ ಮಂಗಳವಾರ ಬಿಡುಗಡೆ ಮಾಡಿದರು.
ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಜಿ. ಭೀಮೇಶ್ವರ ಜೋಷಿ, ಜಿಲ್ಲೆಯ ನೂತನ ತಾಲೂಕು ಕಳಸದಲ್ಲಿ ನಡೆಯಲಿರುವ ಹದಿನೆಂಟನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಂಖ್ಯೆ ಹದಿನೆಂಟು ಪೂರ್ಣತೆಯ ಸಂಕೇತ, ಈ ಸಾಹಿತ್ಯ ಸಮ್ಮೇಳನವು ಜಿಲ್ಲೆಯ ಎಲ್ಲ ಸಹೃದಯೀ ಕನ್ನಡಿಗರ ಪಾಲ್ಗೊಳ್ಳುವಿಕೆ ಯೊಂದಿಗೆ ಸಂಭ್ರಮದಿಂದ ಆಚರಿಸೋಣ ಎಂದು ಶುಭಹಾರೈಸಿದರು.
ಶಾಸಕ ಎಂ.ಪಿ ಕುಮಾರಸ್ವಾಮಿ ಮಾತನಾಡಿ ಕಳಸದಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲು ನನ್ನ ಸಂಪೂರ್ಣ ಸಹಕಾರವಿದ್ದು ಎಲ್ಲರೂ ಒಟ್ಟಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ಮಾಡೋಣ ಹೇಳಿದರು.
ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀ ಸೂರಿ ಶ್ರೀನಿವಾಸ್ ಅವರು ಮಾತನಾಡಿ ಹೊಸದಾಗಿ ಘೋಷನೆಯಾದ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಸಮ್ಮೇಳನವನ್ನು ಮಾಡುವ ಬಗ್ಗೆ ಈ ಹಿಂದೆ ಮಾತು ಕೊಟ್ಟಿದ್ದೆ. ಅದರಂತೆ ಕಳಸದಲ್ಲಿ ಈ ಬಾರಿ ಸಮ್ಮೇಳನವನ್ನು ಮಾಡಲು ನಿರ್ಧಾರ ಮಾಡಲಾಗಿದೆ. ಹಾಗೂ ಈ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಚಟ್ನಲ್ಲಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಳಸ ತಾಲ್ಲೂಕು ಕ.ಸಾ.ಪ ಅಧ್ಯಕ್ಷರಾದ ಶ್ರೀ ಅ.ರಾ.ಸತೀಶ್ಚಂದ್ರ, ಕಳಸ ಮಹಿಳಾ ಕ.ಸಾ.ಪ ಅಧ್ಯಕ್ಷೆ ಮಮ್ತಾಜ್ ಬೇಗಂ, ಕ.ಸಾ.ಪರಿಷತ್ತಿನ ಜಿಲ್ಲಾ ಪ್ರಧಾನ ಸಂಚಾಲಕರಾದ ಶ್ರೀ ಮಗ್ಗಲಮಕ್ಕಿ ಗಣೇಶ್, ರವಿ ದಳವಾಯಿ, ಇಮ್ರಾನ್ ಬೇಗ್, ಮೂಡಿಗೆರೆ ತಾಲ್ಲೂಕು ಕ.ಸಾ.ಪ ಅಧ್ಯಕ್ಷರಾದ ಹೆಚ್.ಎಂ.ಶಾಂತಕುಮಾರ್, ಪ್ರಕಾಶ್ ಕಳಸ ಹೋಬಳಿ ಕ.ಸಾ.ಪ ಅಧ್ಯಕ್ಷ ಶೇಖರ್ ಶೆಟ್ಟಿ, ಹೋಬಳಿ ಕಾರ್ಯದರ್ಶಿ ಪ್ರೇಮಕುಮಾರ್, ಕ.ಸಾ.ಪ ಜಿಲ್ಲಾ ಸಂಚಾಲಕರಾದ ಹೆಚ್.ಅರ್.ಪಾಂಡುರಂಗ, ಬಕ್ಕಿ ಮಂಜುನಾಥ್ ಇದ್ದರು.