ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಲಯ ಮಟ್ಟದ ಒಕ್ಕೂಟಗಳು ಪದಗ್ರಹಣ ಸಮಾರಂಭ ಕಳಸದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಮಾ 24 ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ರಾಜರ್ಷಿ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದು,
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹೊರನಾಡು ಧರ್ಮಕರ್ತರು ಡಾ. ಜಿ ಭೀಮೇಶ್ವರ ಜೋಷಿ,
ಮೂಡಿಗೆರೆ ಶಾಸಕ ಶ್ರೀ ಎಂ.ಪಿ.ಕುಮಾರಸ್ವಾಮಿ
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿಗಳು ಡಾ|ಎಲ್.ಎಚ್.ಮಂಜುನಾಥ್
ಕಳಸ ಗಾ.ಪಂ ಅಧ್ಯಕ್ಷೆ ಶ್ರೀಮತಿ ಸುಜಯ್ ಸದಾನಂದ ಇವರು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದರೆ.
ಅಂದು ಬೆಳಿಗ್ಗೆ 7.00 ಗಂಟೆಯಿಂದ ಸತ್ಯನಾರಾಯಣ ಪೂಜೆ, 9:45 ರಿಂದ ಕಳಸದ ರಥ ಬೀದಿಯಲ್ಲಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪೂರ್ಣ ಕುಂಭ ಸ್ವಾಗತದೊಂದಿಗೆ ಮೆರವಣಿಗೆ,11.00 ಗಂಟೆಗೆ ಮಹಾಮಂಗಳಾರತಿ, 11.00 ರಿಂದ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ, ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಪರಿಕರಗಳ ಹಸ್ತಾಂತರ, ವಾತ್ಸಲ್ಯ ಮನೆ ಮಂಜೂರಾತಿ ಪತ್ರ ವಿತರಣೆ, ಜನ ಮಂಗಳ ಸಲಕರಣೆಗಳನ್ನು ವಿತರಣೆ, 1.30 ರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ವೇದಿಕೆಯಲ್ಲಿ ನೆರವೇರಲಿದೆ.