ಕಳಸ ಲೈವ್ ವರದಿ
ಧಾರ್ಮಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಸಹೃದಯಿ ಎನ್.ಎಂ ಹರ್ಷ(54) ಬುಧವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರು ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಎನ್.ಎಂ ಹರ್ಷ ಕಲಶೇಶ್ವರ ದೇವಸ್ಥಾನದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾಗಿ, ಹೊಸದೇವರ ಚಾವಡಿಯ ಹಾಲಿ ವಹಿವಾಟುದಾರರಾಗಿ, ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ, ಪಂಚಾಯಿತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದಲ್ಲಿ ಯೂತ್ ಪ್ರೆಸಿಡೆಂಡ್, ಹಾಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ, ಕಳಸದಲ್ಲಿ ಯುವಕ ಸಂಘ ಕಟ್ಟಿ ಅದರಲ್ಲಿ ಅಧ್ಯಕ್ಷರಾಗಿ, ಸಾಹಿತ್ಯ ಪರಿಷತ್ ಹೀಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಕಳಸದಲ್ಲಿ ಸಾರ್ವಜನಿಕ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆಯನ್ನು ನೀಡಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು.
ಸದಾ ಜನಾನುರಾಗಿಯಾಗಿದ್ದ ಇವರ ಅಗಲಿಕೆಯು ಕಳಸ ತಾಲ್ಲೂಕಿನ ಎಲ್ಲಾ ವರ್ಗದ ಸಮುದಾಯದ ಬಂಧುಗಳಿಗೆ ಅತೀವ ನೋವನ್ನು ಉಂಟು ಮಾಡಿದೆ. ಕಳಸಕ್ಕೆ ತುಂಬಲಾರದ ನಷ್ಟವಾಗಿದೆ.
Related Stories
September 6, 2024