ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಇಡಕಿಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಗುಂಡಿ ನಿವಾಸಿ ಸುರೇಶ್(32) ಗ್ರಾಮದ ಕಾಫಿ ತೋಟವೊಂದರಲ್ಲಿ ಮರಗಸಿ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತನಾದ ಘಟನೆ ಬುಧವಾರ ನಡೆದಿದೆ.
ಬುಧವಾರ ಬೆಳಿಗ್ಗೆ ತನ್ನ ಸ್ನೇಹಿತರೊಂದಿಗೆ ತೋಟದಲ್ಲಿ ಮರಗಸಿಗೆಂದು ಸುರೇಶ್ ತೆರಳಿದ್ದು. ಮದ್ಯಾಹ್ನ 12ರ ಸಮಯದಲ್ಲಿ ಮರದಿಂದ ಕಾಲು ಜಾರಿ ಬಿದ್ದಿದ್ದಾರೆ.ಕೂಡಲೇ ಚಿಕಿತ್ಸೆಗೆಂದು ಕಳಸ ಸರ್ಕಾರಿ ಆಸ್ಪತ್ರೆಗೆ ತರಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಮೃತನಿಗೆ ಕಳೆದ ಎರಡು ವರ್ಷಗಳ ಹಿಂದೆಯಷ್ಟೆ ಮದುವೆಯಾಗಿದ್ದು ಒಂದು ತಿಂಗಳ ಗಂಡು ಮಗುವಿದೆ.
ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Related Stories
September 6, 2024