ಕಳಸ ಲೈವ್ ವರದಿ
ಕಳಸ ತಾಲೂಕು ಮಾಡಿದ್ದು ನಮ್ಮ ಸರಕಾರದ ಸಾಧನೆಯಾಗಿದ್ದು. ಕಳಸ ಕೇಂದ್ರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವುದು ಕೂಡ ನಮ್ಮ ಅದ್ಯತೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಹೇಳಿದರು.
ಅವರು ಭಾನುವಾರ ಕುಂದೂರು ಭಾಗದ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮತಯಾಚಿಸಿ ಮಾತನಾಡಿ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪಕ್ಷವು ಬಡವರು, ದಲಿತರು, ಹಿಂದುಳಿದವರು, ಮಹಿಳೆಯರು ಸೇರಿದಂತೆ ಎಲ್ಲರಿಗೂ ಅನೇಕ ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಾರ್ಯರೂಪಕ್ಕೆ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹಾಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರಕ್ಕೆ ಬಿಜೆಪಿ ಸರಕಾರರ ಹೆಚ್ಚಿನ ಅನುದಾನ ನೀಡಿ ಪ್ರತೀ ಗ್ರಾಮಗಳ ರಸ್ತೆ, ಕುಡಿಯ ನೀರು ಮತ್ತು ವಸತಿಗೆ ಹೆಚ್ಚಿನ ಆದ್ಯತೆ ನೀಡಿದೆ. ಕಳಸವನ್ನು ಸುಸಜ್ಜಿತ ತಾಲೂಕು ಕೇಂದ್ರ ಮಾಡುವುದು ಪಕ್ಷದ ಪ್ರಮುಖ ಗುರಿಯಾಗಿದೆ. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ಅಬ್ಬರದ ಪ್ರಚಾರದಿಂದ ಗೆಲುವು ಸಾಧ್ಯವಿಲ್ಲ. ಕಾರ್ಯಕರ್ತರು ಮತದಾರರ ಮನೆ ಮನೆಗೆ ತೆರಳಿ ಗೆಲುವಿನ ಅಂತರವನ್ನು ಹೆಚ್ಚಿಸಬೇಕಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹುಲ್ಲೆಮನೆ ಕುಂದೂರು ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.