ಕಳಸ ಲೈವ್ ವರದಿ
ಕಳಸ-ಕುದುರೆಮುಖ ರಾಜ್ಯ ಹೆದ್ದಾರಿಯ ಸಂಸೆ ಟೀ ತೋಟ ಬಳಿ ಪ್ರವಾಸಿಗರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ.
ಸಾಲು ಸಾಲು ರಜೆ ಇರುವ ಹಿನ್ನಲೆಯಲ್ಲಿ ಕಳಸ ತಾಲ್ಲೂಕಿನ ಪ್ರವಾಸಿ ತಾಣಗಳಿಗೆ ಸಾವಿರಾರು ಜನ ಪ್ರವಾಸಿಗರು ಬೇಟಿ ನೀಡಿ ಇಲ್ಲಿ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಿದ್ದಾರೆ.ಆದರೆ ಮುಖ್ಯ ರಸ್ತೆಗಳಲ್ಲಿ ಬೀಕಾ ಬಿಟ್ಟಿಯಾಗಿ ತಮ್ಮ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸ್ಥಳಿಯ ಮತ್ತು ನಿತ್ಯ ಪ್ರಯಾಣಿಸುತ್ತಿರುವ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಸಂಸೆ ಕುದುರೆಮುಖ ಪ್ರದೇಶದಲ್ಲಿ ಇರುವ ನೇತ್ರಾವತಿ ಶಿಖರ ಮತ್ತು ಕುದುರೆಮುಖ ಶಿಖರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನಲೆಯಲ್ಲಿ ಕುದುರೆಮುಖ ರಸ್ತೆಯುದ್ದಕ್ಕೂ ಟ್ರಾಫಿಕ್ ಹೆಚ್ಚಾಗಿತ್ತು.ರಸ್ತೆ ಬದಿಯಲ್ಲಿ ಸಾಲು ಸಾಲು ನಿಲ್ಲಿಸಿದ್ದ ಪ್ರವಾಸಿಗರ ವಾಹನದಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿತ್ತು.
ಸಂಸೆ ಟೀ ತೋಟದ ಬಳಿ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ನಿಂತು ಸೆಲ್ಫಿ ಪೊಟೋ ತೆಗೆಯುತ್ತಿರುವ ಪ್ರವಾಸಿಗರಿಂದ ವಾಹನ ಸವಾರರರಿಗೆ ತೊಂದರೆಯಾದ ಪರಿಣಾಮ ಪ್ರವಾಸಿಗರಿಗೂ ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೂ ಮಾತಿನ ಚಕಮಕಿಗಳು ನಡೆದವು.ಪ್ರವಾಸಿಗರು ರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಿ, ಬರುವ ವಾಹನಗಳಿಗೆ ದಾರಿ ಬಿಡದೆ ಪ್ರವಾಸಿಗರು ರಸ್ತೆಯಲ್ಲಿ ಮನಸ್ಸೋ ಇಚ್ಚೆ ವರ್ತಿಸುತ್ತಿರುವ ಪರಿಣಾಮ ಇದು ಸ್ಥಳಿಯರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.
ರಾಜ್ಯ ಹೆದ್ದಾರಿಯಾಗಿದ್ದು, ಈ ರಸ್ತೆಯಲ್ಲಿ ಪ್ರತಿ ನಿತ್ಯ ಸಾವಿರಾರು ಜನ ತಮ್ಮ ತುರ್ತು ಕೆಲಸಕ್ಕಾಗಿ ಪ್ರಯಾಣಿಸುತ್ತಿರುತ್ತಾರೆ. ಈ ಪ್ರದೇಶದಲ್ಲಿ ಸ್ವಲ್ಪ ಯಾಮಾರಿದರೂ ಕೂಡ ಇಲ್ಲಿ ಅವಘಡ ಸಂಭವಿಸುವ ಸಂಭವವಿದ್ದು ಸಂಬಂದ ಪಟ್ಟವರು ಕೂಡಲೇ ಇಲ್ಲಿ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.