ಕಳಸ ಲೈವ್ ವರದಿ
ಖಾಸಾಗಿ ವಾಹನಗಳನ್ನು ಬಾಡಿಗೆಗೆ ಬಳಸುತ್ತಿರುವುದರಿಂದ ಬಾಡಿಗೆ ಮಾಡುವ ಯೆಲ್ಲೋ ಬೋರ್ಡ್ ವಾಹನ ಮಾಲಕರಿಗೆ ತೊಂದರೆಯಾಗುತ್ತಿದೆ.ಖಾಸಾಗಿ ವಾಹನಗಳನ್ನು ಬಳಸಿ ಬಾಡಿಗೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಟ್ಯಾಕ್ಸಿ ಚಾಲಕರು ಮತ್ತು ಮಾಲಕರು ಕಳಸ ಪಿಎಸೈ ನಿತ್ಯಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು.
ಕಳಸ, ಹೊರನಾಡು, ಸಂಸೆ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ನಾವುಗಳು ಹಳದಿ ಫಲಕದ ವಾಹನಗಳನ್ನು ಬಾಡಿಗೆಗೆ ಬಳಸುತ್ತಿದ್ದೇವೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರ ಸ್ವಂತ ಬಳಕೆಯ ವೈಟ್ ಬೋರ್ಡ್ ವಾಹನಗಳನ್ನು ಬಾಡಿಗೆಗೆ ಬಳಸುತ್ತಿದ್ದಾರೆ.ಇದರಿಂದ ನಮಗೆ ಬಾಡಿಗೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ.
ಸಾರಿಗೆ ಇಲಾಖೆಯ ನಿಬಂಧನೆಗಳನ್ನು ಉಲ್ಲಂಘಿಸಿ ತಮ್ಮ ಖಾಸಾಗಿ ವಾಹನದಲ್ಲಿ ಬಾಡಿಗೆ ಮಾಡುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿ ಕೊಡಬೇಕೆಂದು ತಮ್ಮ ಮನವಿಯಲ್ಲಿ ಕೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಟ್ಯಾಕ್ಸಿ ಚಾಲಕರಾದ ಈಶ್ವರ, ಕೃಷ್ಣಪ್ಪ, ಸುನೀಲ್, ಕೇಶವ, ಪೂರ್ಣೇಶ್, ರಾಜೇಶ್, ರೆಹಮತ್ ಆಲಿ, ಮೋಹನ, ಇತರರು ಇದ್ದರು.
Related Stories
September 6, 2024