ಕಳಸ ಲೈವ್ ವರದಿ
ಜನಪರ ಮತ್ತು ದಕ್ಷ ಐ ಎ ಎಸ್ ಅಧಿಕಾರಿ ಶ್ರೀಮತಿ ಅನಿತಾ ಕೌಲ್ ಸ್ಮರಣಾರ್ಥ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ, ಬೆಂಗಳೂರು ಇವರು ಕೊಡ ಮಾಡುವ ರಾಜ್ಯಮಟ್ಟದ ಅತ್ಯುತ್ತಮ ಅನಿತಾ ಕೌಲ್ ಶಿಕ್ಷಕ/ಕಿ ಪ್ರಶಸ್ತಿಗೆ ಕಳಸ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ಶಾಲಾ ವಿಭಾಗದ ಶಿಕ್ಷಕ ಕೆ.ಎಲ್ ಸಂದೇಶ್ ಆಯ್ಕೆಯಾಗಿದ್ದಾರೆ ಎಂದು ಕೆಜೆವಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣೇಶ್ ಕುಕ್ಕೋಡು ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ, ಪ್ರೌಢ ಶಾಲಾ, ಪದವಿಪೂರ್ವ ಕಾಲೇಜು ಮತ್ತು ಎಸ್ ಡಿ ಎಂ ಸಿ ಈ ನಾಲ್ಕು ಹಂತದಲ್ಲಿ ರಾಜ್ಯದಾದ್ಯಂತ ಒಟ್ಟು 49 ಜನ ಆಯ್ಕೆಗೊಂಡಿದ್ದು, ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಪ್ರೌಢಶಾಲಾ ಹಂತದಲ್ಲಿ ಒಬ್ಬರು, ಪ್ರಾಥಮಿಕ ಶಾಲಾ ಹಂತದಿಂದ ಎಳು ಜನ, ಒಟ್ಟು ಎಂಟು ಜನ ಅನಿತಾ ಕೌಲ್ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಇದ್ದರಲ್ಲಿ ಕಳಸ ತಾಲೂಕಿನಿಂದ ಸಂದೇಶ್ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ ಜನವರಿ 7ರಂದು ಬೆಂಗಳೂರಿನ ಬಸವನಗುಡಿಯಲ್ಲಿರುವ,ಡಾ.ಹೆಚ್ ನರಸಿಂಹಯ್ಯ ಮಲ್ಟಿ ಮೀಡಿಯಾ ಸಭಾಂಗಣದಲ್ಲಿ,ಈ ನಾಡಿನ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಮತ್ತು ಹೆಸರಾಂತ ಮನೋವೈದ್ಯ ಡಾ, ಸಿ. ಆರ್. ಚಂದ್ರಶೇಖರ್ ಹಾಗೂ ಈ. ಬಸವರಾಜ್, ಡಾ.ರಾಜ ನಾಯಕ್, ಕೆ ಬಿ ಮಹಾದೇವಪ್ಪ ಒಳಗೊಂಡಂತೆ ಅನೇಕ ಸಾಹಿತಿಗಳು,ಕವಿಗಳು, ಶಿಕ್ಷಣ ತಜ್ಞರು ಸೇರಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.