ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಳಸ ಎ ವಲಯದ ಬಾಳೆಹೊಳೆ ಕಾರ್ಯಕ್ಷೇತ್ರದಲ್ಲಿ ಭಾನುವಾರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.
ಬಾಳೆಹೊಳೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ನೆರವೇರಿಸಿದರು,ಸಮಾರಂಭದ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷ ಟಿ. ಎಸ್, ಮುರಳೀಧರ ವಹಿಸಿದರು, ಮುಖ್ಯ ಅತಿಥಿಗಳಾಗಿ ಕೆಳಭಾಗ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶ್ರೀ ಸತ್ಯನಾರಾಯಣ ರಾವ್ , ಮಾಜಿ ಜಿಲ್ಲಾ ಪಂ ಸದಸ್ಯ ಕೆ.ಆರ್.ಪ್ರಭಾಕರ ಗೌಡ, ಬಾಳೆಹೊಳೆ ಕೃಷಿಪತ್ತಿನ ಸಹಕಾರ ಸಂಘದ ಪ್ರಬಂಧಕ ಶ್ರೀಮತಿ ನಾಗರತ್ನ ಎಸ್ ಕಾರಂತ್, ಶ್ರೀರಾಮ ಯುವಕ ಸಂಘದ ಅಧ್ಯಕ್ಷ ರಜನಿಕಾಂತ್, ಯೋಜನಾಧಿಕಾರಿ ಶ್ರೀ ಸುರೇಶ ,ಒಕ್ಕೂಟದ ಅಧ್ಯಕ್ಷ ಜಗತ್ಪಾಲ್, ಮಂಜುನಾಥ್, ಶಿವರಾಮ್ ರಾಗೀಹಳ್ಳಿ ಉಪಸ್ಥಿತರಿದ್ದರು,
ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳ ಪ್ರಮಾಣ ಪತ್ರ, ಮಾಶಾಸನ ಫಲಾನುಭವಿಗಳಿಗೆ ಮಂಜೂರಾತಿ ಪತ್ರ, ಕ್ರಿಟಿಕಲ್ ಇಲ್ ನೆಸ್ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು, ಹಾಗೂ ಸಮಾಜ ಸೇವೆ ಮಾಡಿರುವ ಊರಿನ ಹಿರಿಯ ನಾಗರಿಕರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ನಂತರದಲ್ಲಿ ಒಕ್ಕೂಟದ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
Related Stories
September 6, 2024