ಕಳಸ ಲೈವ್ ವರದಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಾಫಿ ಸಂಸ್ಕರಣಾ ಘಟಕ ಹಾಗೂ ಗೋದಾಮು ಕಟ್ಟಡಗಳ ಉದ್ಘಾಟನಾ ಸಮಾರಂಭ ನಾಳೆ(ಜ25)ರಂದು ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಕಳಸದ ಸಂಸ್ಥೆಯ ಕಚಗಾನೆ ಜಾಗದಲ್ಲಿ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ದಿವ್ಯಕ್ಷೇತ್ರ ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠಾಧೀಶ್ವರರಾದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಹೊರನಾಡು ಅನ್ನಪೂಣೇಶ್ವರಿ ಕ್ಷೇತ್ರ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ, ಸೇರಿದಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು ಸಹಕಾರಿ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ತಿಳಿಸಿದ್ದಾರೆ.