ಕಳಸ ಲೈವ್ ವರದಿ
ದಾರವಾಡದಲ್ಲಿ ಮೂರು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಪ್ರೌಢಶಾಲೆಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಳಸ ಜೆ ಇ ಎಮ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕವ್ವಾಲಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯಲ್ಲಿ 10ನೇ ತರಗತಿಯ ಸಾಕ್ಷಿ, ಅನುಪಮ, ಸಾನಿಧ್ಯ, ಹಂಸವಿ ಹಾಗೂ 9 ನೇ ತರಗತಿಯ ಅಬಿಷ್ಟ ಜೈನ್ ಭಾಗವಹಿಸಿದ್ದರು.
ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಗಿಟ್ಟಿಸಿಕೊಂಡ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗ, ಪೋಷಕ ವರ್ಗದವರು ಅಭಿನಂದಿಸಿದ್ದಾರೆ.