ಕಳಸ ಲೈವ್ ವರದಿ
ಕಳಸ ಶ್ರೀಮತಿ ಸುಜಯ ಸದಾನಂದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕಳಸದಲ್ಲಿ ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಕಳಸ ಗ್ರಾಮ ಪಂಚಾಯತಿ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ಬಾರಿ ಜಯಗಳಿಸಿ ಎರಡೂವರೆ ವರ್ಷ ಪಂಚಾಯಿಯ ಅಧ್ಯಕ್ಷೆಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
ಇವರ ಪಂಚಾಯಿತಿ ಅಧ್ಯಕ್ಷಾವಧಿಯಲ್ಲಿನ ಕಾರ್ಯವೈಖರಿ ಮತ್ತು ಪಕ್ಷ ಬೇದ ಮರೆತು ಎಲ್ಲರನ್ನೂ ವಿಶ್ವಾಸದಿಂದ ಕಾಣುತ್ತಿದ್ದ ಇವರು ಸಾಕಷ್ಟು ಜನಮನ್ನಣೆಯನ್ನು ಪಡೆದಿದ್ದರು.
ಬಿಜೆಪಿ ಯಲ್ಲಿ 2014ರಿಂದ ಸಕ್ರೀಯ ಕಾರ್ಯಕರ್ತರಾಗಿದ್ದು, ಕಳಸ ಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಮತ್ತು ಮೂಡಿಗೆರೆ ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ರಾಜಕೀಯ ಹೊರತಾಗಿ ಸಾಕಷ್ಟು ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮಗಳೂರು ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯೆ, ಕಳಸ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ, ತಾಲ್ಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ, ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಬಾರಿ ಕಳಸ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸ್ಥಾನಕ್ಕೆ ಸುಜಯ ಸದಾನಂದರವರ ಹೆಸರು ಕೇಳಿ ಬರುತ್ತಿದ್ದ ಸಂದರ್ಭದಲ್ಲಿ ಇದೀಗ ಅಚ್ಚರಿಯಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಅಯ್ಕೆಯಾಗಿದ್ದಾರೆ.
ಇವರು ಜಿಲ್ಲಾ ಕಾರ್ಯದರ್ಶಿಯಾಗಿದ್ದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
Related Stories
September 6, 2024