ಕಳಸ ಲೈವ್ ವರದಿ
ರಾಜ್ಯದಲ್ಲಿ ಎ 26 ರಂದು ನಡೆಯಲಿರೋ ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಬುಧವಾರ ಸಂಜೆಗೆ ತೆರೆ ಬಿದ್ದಿದ್ದು, ಗುರುವಾರ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದು, ಕಾವೇರಿದ ಬಿಸಿಲಿನ ಜೊತೆ ಮನೆ ಮನೆ ಪ್ರಚಾರದ ಕಾವು ಕೂಡ ಜೋರಾಗಿದೆ.
ಸುಡುವ ಬಿಸಿಲಿಲನ್ನು ಲೆಕ್ಕಿಸದೆ ಮನೆ ಮನೆಗೆ ತೆರಳಿ ತಮ್ಮ ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತದಾರರನ್ನು ಓಲೈಸುವ ಕೆಲಸ ನಡೆಯುತ್ತಿದೆ.
ಶುಕ್ರವಾರ ರಾಜ್ಯದಲ್ಲಿ ಮೊದಲನೆ ಹಂತದ ಚುನಾವಣೆಯ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಲಿದೆ.14 ಕ್ಷೇತ್ರಗಳಲ್ಲಿ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯಲಿದೆ.