ಕಳಸ ಲೈವ್ ವರದಿ
ತಾಲ್ಲೂಕಿನ ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗನಳ್ಳ ಸತೀಶ(25) ಎಂಬ ವ್ಯಕ್ತಿ ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಈ ಬಗ್ಗೆ ಕಗ್ಗನಳ್ಳ ಭದ್ರಾ ನದಿಯಲ್ಲಿ ಸತೀಶನ ಪತ್ತೆಗಾಗಿ ಅಗ್ನಿಶ್ಯಾಮಕ ದಳ, ಕಳಸ ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.
ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿದ್ದ ಸತೀಶ ತನ್ನ ಅಕ್ಕನೊಂದಿಗೆ ಕಗ್ಗನಳ್ಳದಲ್ಲಿ ವಾಸ ಇದ್ದರು ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Related Stories
September 6, 2024