ಕಳಸ ಲೈವ್ ವರದಿ
ಕಳಸದ ಕಲ್ಮಕ್ಕಿಯ ಎಸ್.ಮಣಿ ಮತ್ತು ಸುಮಿತ್ರಾ ದಂಪತಿಯ ಪುತ್ರ ರಾಧಾಕೃಷ್ಣ ಎಂ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ “ಹೈಬ್ರಿಡ್ ಅಪ್ರೋಚ್ ಫಾರ್ ಮಲ್ಟಿಮೋಡಲ್ ಇಮೇಜ್ ಫ್ಯೂಷನ್ ಫಾರ್ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ಸ್” ಎಂಬ ಪ್ರಬಂಧಕ್ಕಾಗಿ ಡಾಕ್ಟರೇಟ್ ಪಡೆದಿದ್ದಾರೆ.
ರಾಧಾಕೃಷ್ಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕಳಸದ ಜೆಇಎಂ ಶಾಲೆಯಲ್ಲಿ ಪೂರೈಸಿ ನಂತರ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪಾಲಿಟೆಕ್ನಿಕ್ ಸೊರಬದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದ್ದಾರೆ.
ಎಐಟಿ ಚಿಕ್ಕಮಗಳೂರಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಬಿಇ ಪೂರ್ಣಗೊಳಿಸಿ, ಹೈದರಾಬಾದ್ನ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ “ವಿಎಲ್ಎಸ್ಐ ಮತ್ತು ಎಂಬೆಡೆಡ್ ಸಿಸ್ಟಮ್” ವಿಷಯದಲ್ಲಿ ಎಂಟೆಕ್ ಪದವಿ ಪಡೆದಿದ್ದಾರೆ. ಇವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಅನೇಕ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.