ಕಳಸ ಲೈವ್ ವರದಿ
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ನಾಕಬಂದಿ ಹಾಕಲೆಂದು ವಿಶ್ವಹಿಂದೂ ಪರಿಷತ್ ಬಜರಂಗದಳ ಕಳಸ ಪ್ರಖಂಡ ಕಳಸ ಪೊಲೀಸ್ ಠಾಣೆಗೆ ಮನವಿ ಮಾಡಿದೆ.
ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ಬಕ್ರೀದ್ ಹಬ್ಬದವರೆಗೆ ನಾಕಾಬಂದಿ ಹಾಕಬೇಕು. ಬಕ್ರೀದ್ ವರೆಗೆ ಕಿವಿಯೋಲೆ ಇಲ್ಲದ ಜಾನುವಾರುಗಳನನ್ನು ಸಾರ್ವಜನಿಕ ಜಾಗಗಳಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಚಾರವನ್ನು ಮಾಡಬೇಕು. ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಖಾಯಿದೆ 2020ರಂತೆ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿಯನ್ನು ಕಳಸ ಪೊಲೀಸ್ ಠಾಣಾಧಿಕಾರಿಗಳಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಶೃಂಗೇರಿ ಜಿಲ್ಲಾ ಸಂಯೋಜಕ ಅಜಿತ್ ಕುಲಾಲ್, ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ಪ್ರಮುಖ್ ಜಗದೀಶ್ ಭಟ್,ಕಳಸ ಪ್ರಖಂಡದ ಸುರಕ್ಷಾ ಪ್ರಮುಖ್ ದೀಕ್ಷಿತ್, ಸಂತೋಷ್ ಇದ್ದರು.
Related Stories
September 6, 2024