ಕಳಸ ಲೈವ್ ವರದಿ
ಕಳಸದ ಅಂಬಾ ತೀರ್ಥದಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಂದು ಶಂಕೆ ವ್ಯಕ್ತವಾಗಿದೆ.
ಮುಳುಗಿರುವ ಯುವಕ ಸ್ಥಳೀಯ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶದ ಸಾಗರ್ ( 19 ) ಎಂದು ಶಂಕಿಸಲಾಗಿದೆ.
ಭಾನುವಾರ ತೋಟಕ್ಕೆ ರಜಾ ಇದ್ದುದರಿಂದ ಅಂಬಾತೀರ್ಥದಲ್ಲಿ ಸ್ನಾನಕ್ಕೆ ಇಳಿದಿದ್ದಾರೆ.ಈ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
Related Stories
September 6, 2024