ಕಳಸ ಲೈವ್ ವರದಿ
ಸಾಹಿತ್ಯದೊಂದಿಗೆ ಧ್ಯಾನವನ್ನು ಮಾಡಿದ್ದಲ್ಲಿ ಸದೃಢ ದೇಹ ಪ್ರಕೃತಿಯನ್ನು ಉತ್ತಮಗೊಳಿಸುವಲ್ಲಿ ಯಶಸ್ವಿಯಾಗುವುದೆಂದು ಕಳಸ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅ.ರಾ ಸತೀಶ್ಚಂದ್ರ ಹೇಳಿದರು.
ಕಳಸದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸಭಾಂಗಣದಲ್ಲಿ ಕಳಸ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಮಹಿಳಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಳಸ ಇದರ ಸಂಯುಕ್ತಾಶ್ರಯದಲ್ಲಿ ಆ 10ರಿಂದ ಆ 19ರ ವರೆಗೆ ನಡೆಯುವ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶ್ರಾವಣ ಸಂಜೆ ಕಾರ್ಯಕ್ರಮದಲ್ಲಿ ಪ್ರತೀ ನಿತ್ಯ ಯೋಗ-ದ್ಯಾನ ಚಿಂತನ ಮಂಥನ ಕಾರ್ಯಕ್ರಮವಿದ್ದು, ಶ್ರಾವಣ ಸಂಜೆ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಂಡಿದ್ದು ಸಾಹಿತ್ಯವನ್ನು ಪ್ರತಿಯೊಬ್ಬ ವ್ಯಕ್ತಿಯೂ ಅನುಭವಿಸಿ ಅದನ್ನು ಚಿಂತಿಸಿ ಅದರಿಂದ ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳುವಂತಾಗಬೇಕು. ಇದರ ಸಮಾರೋಪ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಯನ್ನು ಗೌರವಿಸಲಾಗುವುದೆಂದು ಈ ಸಂದರ್ಭದಲ್ಲಿ ತಿಳಿಸಿದರು.
ತಾಲೂಕು ಮಹಿಳಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಮ್ತಾಜ್ ಬೇಗಂ ಅವರು ಮಾತನಾಡಿ ಯೋಗ ಧ್ಯಾನ ಇವು ಒಂದಕ್ಕೊಂದು ಪೂರಕ. ಇದೊಂದು ವಿನೂತನ ಪ್ರಯೋಗವನ್ನು ಇದು ನಮ್ಮ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಈ ರೀತಿಯ ಕಾರ್ಯಕ್ರಮ ನಡೆಯುತ್ತಿದೆ. ಸಾಕಷ್ಟು ಹೊಸ ರೀತಿಯ ಕಾರ್ಯಕ್ರಮವನ್ನು ಸಾಹಿತ್ಯ ಪರಿಷತ್ತು ಹಾಗೂ ಮಹಿಳಾ ಘಟಕ ಸೇರಿ ನಡೆಸಿಕೊಟ್ಟಿದೆ ಮತ್ತು ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಟ್ಟಿದೆ ಹಾಗೂ ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹೋಬಳಿ ಸಮ್ಮೇಳನವನ್ನು ಹಾಗೂ ಕಸಬಾ ಹೋಬಳಿಯ ಕೆಲವೊಂದು ಕಾರ್ಯಕ್ರಮಗಳು ನಡೆಯಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಚಾಲಕ ಪಾಡುರಂಗ, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಸುಜಯ ಸದಾನಂದ, ಯೋಗ ಶಿಕ್ಷಕ ವೈ ಪ್ರೇಮ್ ಕುಮಾರ್, ಕಸಬಾ ಹೋಬಳಿ ಅಧ್ಯಕ್ಷ ಶೇಖರ ಶೆಟ್ಟಿ, ಅಜಿತ್ ಪ್ರಸಾದ್, ಕಿರಣ್ ಶೆಟ್ಟಿ ಇತರರು ಇದ್ದರು.