ಕಳಸ ಲೈವ್ ವರದಿ
ಆದಿಶಕ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಹೊರನಾಡು ಮತ್ತು ಕಳಸ ಕಲಶೇಶ್ವರ ದೇವಸ್ಥಾನದಲ್ಲಿ ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ ಮಾಡಲಾಯಿತು.
ಹೊರನಾಡಿನಲ್ಲಿ ಬೆಳಗ್ಗೆ 9:00ಗೆ ಧಾರ್ಮಿಕ ಕಾರ್ಯಕ್ರಮಗಳಾದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ, ಲಕ್ಷದೂರ್ವಾರ್ಚನೆ, ಕೋಟಿ ಕುಂಕುಮಾರ್ಚನೆ ನಡೆಯಿತು. ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ದಂಪತಿಗಳು ಹಾಗೂ ಭಕ್ತರು ಪಾಲ್ಗೊಂಡರು.
ಕಲಶೇಶ್ವರ ಸ್ವಾಮಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದದ ರೂಪದಲ್ಲಿ ಅರಿಸಿನ-ಕುಂಕುಮ ಬಳೆಗಳನ್ನು ನೀಡಲಾಯಿತು.
ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಪ್ರೇಮಲತಾ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಕಲ್ಲಾನೆ, ಶ್ರೀಮತಿ ಸುಮಲತಾ ಶೇಷಗಿರಿ, ದೇವಸ್ಥಾನದ ಸಿಬ್ಬಂದಿಗಳು ಇದ್ದರು.
Related Stories
September 6, 2024